Monday, 15 January 2024

Sahitya / Story / ಮಕ್ಕಳ ಕಥೆ - ಸಾಧನೆಯ ಹಾದಿ

  


ಸಾಧನೆಯ ಹಾದಿ




ಕಮಲಾಪುರ ಎಂಬ ಊರಿನಲ್ಲಿ ರಾಮಯ್ಯ ಎಂಬ ರೈತನಿದ್ದನು. ರಾಮಯ್ಯ ತನಗೆ ತನ್ನ ಪೂರ್ವಿಕರಿಂದ ಬಂದ ಜಮೀನಿನಲ್ಲಿ ಉತ್ತಿ ಬಿತ್ತಿ ಬೆಳೆ ಬೆಳೆದು ಸುಖವಾಗಿ ಜೀವನ ಸಾಗಿಸುತ್ತಿದ್ದನು. ಯಾವುದೇ ಆಮೀಷಕ್ಕೆ ಅತೀ ಆಶೆಗೆ ಒಳಗಾಗದೇ ಕಷ್ಟ ಪಟ್ಟು ದುಡಿಯುವುದೇ ಅವನ ನಿತ್ಯ ಕಾಯಕವಾಗಿತ್ತು. ತನ್ನ ದಿನದ ಬಹುತೇಕ ಭಾಗವನ್ನು ಹೊಲ ಗದ್ದೆಗಳಲ್ಲಿ ಕಳೆಯುತ್ತಿದ್ದನು.  ಕೆಲವು ಜನರು ಅವನನ್ನು ಆಸೆಬುರುಕ ಎಂತಲೂ ಲೋಭಿ ಎಂತಲೂ ಮತಿ ಹೀನ ಎಂತಲೂ ಕರೆಯುತ್ತಿದ್ದರು. ಆದರೂ ಯಾರ ಮಾತಿಗು ಗಮನ ಕೊಡದೆ ತನ್ನ ಕಾಯಕವನ್ನು ತಪ್ಪದೆ ಮಾಡುತ್ತಿದ್ದನು.


ರಾಮಯ್ಯನಿಗೆ ಒಬ್ಬ ಮಗನಿದ್ದನು. ಅವನ ಹೆಸರು  ಕಮಲಾಕರ ಎಂದು. ಕಮಲಾಕರ ಅಪ್ಪನ ವಿರುದ್ದ ಗುಣಗಳನ್ನು ಹೊಂದಿದ್ದ. ಹೊಲದಲ್ಲಿ ದುಡಿಯುವುದರಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ತಾನೊಬ್ಬ ದೊಡ್ಡ ವಿದ್ವಾಂಸನಾಗಿ ಮಾಹಾರಾಜರಿಂದ ಸನ್ಮಾನಿತನಾಗಬೇಕು ಎಂಬ ಬಯಕೆ ಅವನಲ್ಲಿ ಮೂಡಿತ್ತು . ಇದಕ್ಕಾಗಿ ರಾಮಯ್ಯನೊಂದಿಗೆ ವಾಗ್ವಾದ ಮಾಡಿ ಶಾಸ್ತ್ರಾಭ್ಯಾಸಗಳಲ್ಲಿ ತೊಡಗುತ್ತಿದ್ದನು. ಕಾಯಕದ ಅರಿವಿಲ್ಲದ ಕಮಲಾಕರ ಹಣಕ್ಕಾಗಿ ತಂದೆಯನ್ನು ಪೀಡಿಸುತ್ತಿದ್ದನು. ದೊಡ್ಡ ದೊಡ್ಡ ವಿದ್ವಾಂಸರೆದುರು ಸೋತು ಮನೆಗೆ ಬರುತ್ತಿದ್ದನು. ಆದರೂ ತನ್ನ ತಂದೆ ರಾಮಯ್ಯ ನಿಗೆ " ನೋಡುತ್ತಿರು ನಾನು ಒಂದಲ್ಲಾ ಒಂದು ದಿನ ಮಹಾರಾಜರಿಂದ ಸನ್ಮಾನಿತನಾಗುತ್ತೇನೆ. ಅದು ನಿನ್ನಿಂದ ಸಾಧ್ಯವಿಲ್ಲ. ನೀನೋ ಅನಕ್ಷರಸ್ಥ ರೈತ." ಎಂದು ಹೀಯಾಳಿಸುತ್ತಿದ್ದನು. ರಾಮಯ್ಯ,  ಮಗನ ಮಾತುಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ತನ್ನ ಕಾಯಕದಲ್ಲಿ ಮಗ್ನನಾಗಿರುತ್ತಿದ್ದನು.


ಒಂದು ದಿನ ಮಹಾರಾಜರು ಮಾರುವೇಷದಲ್ಲಿ ರಾಜ್ಯದಲ್ಲಿ ಪ್ರವಾಸ ಮಾಡುವಾಗ ರಾಮಯ್ಯನ ಹೊಲಗದ್ದೆಯ  ಬಳಿ ಬಂದರು. ಸಮೃದ್ಧ ಫಸಲನ್ನು ಕಂಡು ಮಹಾರಾಜರು ಸಂತುಷ್ಠರಾದರು. ದೂರದಲ್ಲಿ ಕೆಲಸ ಮಾಡುತ್ತಿದ್ದ ರಾಮಯ್ಯನನ್ನು ಕರೆದು  ರಾಮಯ್ಯನ ಕಾಯಕದ ಬಗ್ಗೆ ವಿಚಾರಿಸಿದರು. ರಾಮಯ್ಯನ ಪರಿಶ್ರಮ ಮಹಾರಾಜರನ್ನು ತುಂಬಾ ಸೆಳೆಯಿತು. ಮಾರುವೇಷದಲ್ಲಿದ್ದ ಮಹಾರಾಜರು ರಾಮಯ್ಯನಿಗೆ, " ರಾಮಯ್ಯ , ನಿನ್ನ ಕರ್ತವ್ಯ , ಶ್ರಮ ಕಂಡು ನನಗೆ ತುಂಬಾ ಸಂತಸವಾಗಿದೆ. ನಾಳೆ ಅರಮನೆಗೆ ಬಾ. ನನ್ನ ಮಕ್ಕಳಿಗೂ ನಿನ್ನ ಶ್ರಮದ ಪರಿಚಯ ಮಾಡಿಕೊಡುವಂತೆ" ಎಂದಾಗ ,ರಾಮಯ್ಯ " ಬುದ್ದಿ ನೀವು ಯಾರು ಅಂತ ಅರಮನೆಯಲ್ಲಿ ಕೇಳಲಿ? " ಎಂದಾಗ , ಮಹಾರಾಜ " ಅರಮನೆಯ ಸೇವಕರಿಗೆ ನಾನೊಬ್ಬ ರೈತ . ರೈತರ ಮಹಾಸೇವಕನ್ನು ನೋಡಬೇಕಿದೆ ಎಂದು ಹೇಳಿದರೆ ಸಾಕು ನನ್ನ ಬಳಿ ಕರೆದು ತರುತ್ತಾರೆ" ಎಂದಾಗ ರಾಮಯ್ಯ ಆಗಲಿ ಎಂದು ಒಪ್ಪಿಕೊಂಡ.


  ಮರುದಿನ ರಾಮಯ್ಯ ತಾನು ಮಹಾರಾಜರ ಅರಮನೆಗೆ ಹೋಗಬೇಕು ಎಂದು ಬಗನ ಬಳಿ ಹೇಳಿದಾಗ , ಮಗ ಕಮಲಾಕರ " ಯಾರೋ ನಿನಗೆ ಸುಳ್ಳು ಹೇಳಿರಬೇಕು. ನೀನೊಬ್ಬ ಬಡ ರೈತ ‌. ಅಲ್ಲಿ ನಿನ್ನಿಂದಾಗುವ ಕೆಲಸವಾದರೂ ಏನಿದೆ?" ಎಂದಾಗ ರಾಮಯ್ಯ ಮಗನ ಮಾತನ್ನು ಲೆಕ್ಕಿಸದೇ ನೇರವಾಗಿ ಅರಮನೆಗೆ ಬಂದಾಗ ಭಟರು ರಾಮಯ್ಯನನ್ನು ವಿಚಾರಿಸಿ ರೈತರ ಮಹಾಸೇವಕನಾದ ಮಹಾರಾಜರ ಬಳಿ ಕರೆದುಕೊಂಡು ಬರುತ್ತಾರೆ. ರಾಮಯ್ಯನಿಗೆ ದಿಘ್ರ್ಬಮೆಯಾಗುತ್ತದೆ. ಮಹಾರಾಜರು , ರಾಮಯ್ಯ ನ ಕೃಷಿ ಸಾಧನೆಯನ್ನು ಸಭಿಕರಿಗೆಲ್ಲಾ ತಿಳಿಸುತ್ತಾರೆ. ರಾಮಯ್ಯ ನನ್ನು ಮಹಾರಾಜರು ಸನ್ಮಾನಿಸುತ್ತಾರೆ.  ಇದನ್ನು ಕಂಡ ಕಮಲಾಕರನ ಅಹಂಕಾರವೆಲ್ಲಾ ಕರಗಿಹೋಗಿ ನಾಚಿಕೆಯಿಂದ ತಲೆತಗ್ಗಿಸುತ್ತಾನೆ.ಸಾಧನೆಗೆ ವಿದ್ವಾಂಸನೇ ಆಗಬೇಕೆಂದಿಲ್ಲ. ಒಬ್ಬ ಸಾಮಾನ್ಯ ರೈತನಲ್ಲೂ ಸಾಧನೆಯ ಗುಣವಿದೆ. " ಎಂದಾಗ  ಅಂದಿನಿಂದ ಕಮಲಾಕರನೂ ತಂದೆಯ ಸಾಧನೆಯ ಹಾದಿಯನ್ನು ಹಿಡಿಯುತ್ತಾನೆ.



=> => ವೆಂಕಟೇಶ ಚಾಗಿ

No comments:

SCHOOL - ಶಾಲಾ ಉಪಯುಕ್ತ
No Bag dayನಾವು ಮನುಜರುಗಣಿತ ಗಣಕ21 ದಿನಗಳ ಓದು
100 ದಿನಗಳ ಓದುFLN PROGRAMಕಲಿಕಾ ಹಬ್ಬಪ್ರೇರಣಾ ಕ್ಲಬ್
ಸಚೇತನ ಕಾರ್ಯಕ್ರಮವೀರಗಾಥಾ program20 ಅಂಶಗಳ ಕಾರ್ಯಕ್ರಮ ಜಯಂತಿಗಳು
ನಮೂನೆಗಳು ಗೋಡೆ ಬರಹಗಳುಶೈಕ್ಷಣಿಕ ಪ್ರವಾಸ  ಭಾಷಣಗಳು


ADMISSION ದಾಖಲಾತಿ SATS LOGINPOST SANCTION EDU DICE + LOGIN
10 ಅಂಶಗಳ ಕಾರ್ಯಕ್ರಮSDMC ಸಮಗ್ರPM - SHRIಅನುದಾನ ಬಳಕೆ
SAPSDPವಿದ್ಯಾಂಜಲಿ 2.0ಗ್ರಂಥಾಲಯ ಅನುದಾನ
TOFIEಪ್ರತಿಭಾ ಕಾರಂಜಿSSP ಶಾಲಾ ಲಾಗಿನ್FIND SCHOOL


ಶೈಕ್ಷಣಿಕ ಮಾರ್ಗದರ್ಶಿವಾರ್ಷಿಕ ಪಠ್ಯ ವಿಭಜನೆಅಂದಾಜು ಪತ್ರಿಕೆತರಗತಿವಾರು ವೇಳಾಪಟ್ಟಿ
ರಸಪ್ರಶ್ನೆ ಕಾರ್ಯಕ್ರಮ govt ಸಸ್ಯ ಶ್ಯಾಮಲಾವಿದ್ಯಾ ವಾಹಿನಿ
ಶಾಲಾ ಕ್ರೋಢಿಕೃತ ವೇಳಾಪಟ್ಟಿ
ಸರಕಾರಿ ರಜೆಗಳುಶಾಲಾ ವಿದ್ಯಾರ್ಥಿ ಸಂಘಗಳುಮುಖ್ಯ ಗುರುಗಳ ಕರ್ತವ್ಯಗಳುText Books 
ಉಚಿತ ವಿದ್ಯುತ್ಗ್ರೇಡ್ - GRADEಪ್ರಗತಿ ಪತ್ರಗಳುವೇಳಾಪಟ್ಟಿ

Gjhn



MDM - ಮದ್ಯಾಹ್ನ ಬಿಸಿಯೂಟ ಯೋಜನೆ

ಪ್ರಚಲಿತ ಪೋಸ್ಟ್‌ಗಳು

Random Posts

ಪ್ರಚಲಿತ ಪೋಸ್ಟ್‌ಗಳು

SCHOOL - ಶಾಲಾ ಉಪಯುಕ್ತ
No Bag dayನಾವು ಮನುಜರುಗಣಿತ ಗಣಕ21 ದಿನಗಳ ಓದು
100 ದಿನಗಳ ಓದುFLN PROGRAMಕಲಿಕಾ ಹಬ್ಬಪ್ರೇರಣಾ ಕ್ಲಬ್
ಸಚೇತನ ಕಾರ್ಯಕ್ರಮವೀರಗಾಥಾ program20 ಅಂಶಗಳ ಕಾರ್ಯಕ್ರಮ ಜಯಂತಿಗಳು
ನಮೂನೆಗಳು ಗೋಡೆ ಬರಹಗಳುಶೈಕ್ಷಣಿಕ ಪ್ರವಾಸ  ಭಾಷಣಗಳು


ADMISSION ದಾಖಲಾತಿ SATS LOGINPOST SANCTION EDU DICE + LOGIN
10 ಅಂಶಗಳ ಕಾರ್ಯಕ್ರಮSDMC ಸಮಗ್ರPM - SHRIಅನುದಾನ ಬಳಕೆ
SAPSDPವಿದ್ಯಾಂಜಲಿ 2.0ಗ್ರಂಥಾಲಯ ಅನುದಾನ
TOFIEಪ್ರತಿಭಾ ಕಾರಂಜಿSSP ಶಾಲಾ ಲಾಗಿನ್FIND SCHOOL


ಶೈಕ್ಷಣಿಕ ಮಾರ್ಗದರ್ಶಿವಾರ್ಷಿಕ ಪಠ್ಯ ವಿಭಜನೆಅಂದಾಜು ಪತ್ರಿಕೆತರಗತಿವಾರು ವೇಳಾಪಟ್ಟಿ
ರಸಪ್ರಶ್ನೆ ಕಾರ್ಯಕ್ರಮ govt ಸಸ್ಯ ಶ್ಯಾಮಲಾವಿದ್ಯಾ ವಾಹಿನಿ
ಶಾಲಾ ಕ್ರೋಢಿಕೃತ ವೇಳಾಪಟ್ಟಿ
ಸರಕಾರಿ ರಜೆಗಳುಶಾಲಾ ವಿದ್ಯಾರ್ಥಿ ಸಂಘಗಳುಮುಖ್ಯ ಗುರುಗಳ ಕರ್ತವ್ಯಗಳುText Books 
ಉಚಿತ ವಿದ್ಯುತ್ಗ್ರೇಡ್ - GRADEಪ್ರಗತಿ ಪತ್ರಗಳುವೇಳಾಪಟ್ಟಿ